ಅಬಕಾರಿ ನೀತಿ ಅಕ್ರಮ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಮತ್ತೆ ಸಮನ್ಸ್.
ಸಿ ಬಿ ಐನಿಂದ ಸಮನ್ಸ್ ಜಾರಿ ಮಾಡಿದೆ.
Published By: ಆನಂದಕುಮಾರ ನಾಯಕ್ ಬಾಗಲಕೋಟ ತಾಲೂಕ ರಿಪೋರ್ಟ್
Last Updated Date: 19-Feb-2023

ನವದೆಹಲಿ - : ಅಬಕಾರಿ ಅಕ್ರಮ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಅಬಕಾರಿ ನೀತಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ, ಸಿಬಿಐ ತನಿಖೆಗೆ ವಹಿಸಬೇಕು ಎಂದು ಅಲ್ಲಿನ ರಾಜ್ಯಪಾಲ ವಿ.ಕೆ.ಸಕ್ಸೇನಾ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದರು. ಅದರಂತೆ ಈಗ ಇಡಿ ಮತ್ತು ಸಿಬಿಐ ಎರಡೂ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿವೆ. ಈಗಾಗಲೇ ಹಲವರ ಬಂಧನವಾಗಿದೆ. ದೆಹಲಿ ಅಬಕಾರಿ ಇಲಾಖೆ ಜವಾಬ್ದಾರಿ ಮನೀಶ್ ಸಿಸೋಡಿಯಾ ಅವರದ್ದೇ ಆಗಿರುವುದರಿಂದ, ಅವರನ್ನೂ ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದ್ದು, ಈಗ ಮತ್ತೊಮ್ಮೆ ಸಿಬಿಐನಿಂದ ಸಮನ್ಸ್ ಜಾರಿ ಮಾಡಿದೆ.
