logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ರಾಷ್ಟ್ರೀಯ ಜೂನಿಯರ್ ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಗೆ ಆಯ್ಕೆಯಾದ ಗ್ರಾಮೀಣ ವಿದ್ಯಾರ್ಥಿ(ನಿಯರಿಗೆ) ಸಮವಸ್ತ್ರ ವಿತರಣೆ.
Published By: ಶ್ರೀ ಚಿದಾನಂದ ಅಮ್ಮಲಝರಿ ಬಬಲೇಶ್ವರ ತಾಲೂಕು ರಿಪೋರ್ಟರ್
Last Updated Date:  24-Feb-2023
ಕಲಾಸುದ್ದಿ

ರಾಷ್ಟ್ರೀಯ ಜೂನಿಯರ್ ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಗೆ ಆಯ್ಕೆಯಾದ ಗ್ರಾಮೀಣ ವಿದ್ಯಾರ್ಥಿ(ನಿಯರಿಗೆ) ಸಮವಸ್ತ್ರ ವಿತರಣೆ. ರಾಷ್ಟ್ರೀಯ ಜೂನಿಯರ್ ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಗೆ ಬಿಹಾರದ ಭೋಜಪುರ್ ಜಿಲ್ಲೆಯ ಆಗ್ರಾದಲ್ಲಿ ನಡೆಯಲಿರುವ ಜ್ಯೂನಿಯರ್ ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಬಾಲಕರ ತಂಡ, ಮತ್ತು ಬಾಲಕಿಯರ ತಂಡ ಹಾಗೂ ಉತ್ತರ ಕರ್ನಾಟಕ ಬಾಲಕರ ತಂಡಗಳಿಗೆ ಸಮವಸ್ತ್ರವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿತರಿಸಲಾಯಿತು. ಕರ್ನಾಟಕ ರಾಜ್ಯ ತಂಡಕ್ಕೆ ನಗರ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್, ಬಾಲಕಿಯರ ತಂಡಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್, ಹಾಗೂ ಉತ್ತರ ಕರ್ನಾಟಕದ ಬಾಲಕರ ತಂಡಕ್ಕೆ ರಾಜಶೇಖರ ಕವಲಗಿಯವರು ಸಮವಸ್ತ್ರ ಕೊಡುಗೆ ನೀಡಿದರು. ಈ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ನಗರ ಶಾಸಕರ ಧರ್ಮಪತ್ನಿ ಶ್ರೀಮತಿ ಶೈಲಾ.ಬಿ.ಪಾಟೀಲ್ ಯತ್ನಾಳ್ ಅವರು ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಟ್ಟ ರಾಜ್ಯ ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆ, ಹಾಗೂ ವಿಜಯಪುರ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುತ್ತೇನೆ ನಮ್ಮ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ, ಸಮಾಜದ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸೋಣ ಎಂದರು. ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆಯ ಉಪಾಧ್ಯಕ್ಷರಾದ ಬಸನಗೌಡ ಹರನಾಳ ಮಾತನಾಡಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಕ್ರೀಡೆಯಲ್ಲಿ ಸಾಧನೆ ಮಾಡಿರಲಿ ಅಂತಹ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣದೊಂದಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗಿದ್ದೇವೆ, ಇದರ ಸದುಪಯೋಗ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ವೇದಿಕೆ ಮೇಲೆ ರಾಜ್ಯ ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಾಹೀದಾಬೇಗಂ ಹಕೀಂ ನಮ್ಮ ತಂಡಗಳು ಗೆದ್ದು ಚಾಂಪಿಯನ್ ಆಗುವುದು ಖಚಿತ ಈಗಾಗಲೇ ರಾಜ್ಯ ತಂಡದಲ್ಲಿ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ, ನಾವು ನಮ್ಮ ಸಂಸ್ಥೆಯ ಪರವಾಗಿ ಎಲ್ಲ ವಿವಿಧ ತರಬೇತಿ ಹಾಗೂ ಸೌಲಭ್ಯ ಕಲ್ಪಿಸಿದ್ದೇವೆ ಎಂದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಎಸ್ ಜಿ ಲೋಣಿಯವರು ಕ್ರೀಡಾ ಇಲಾಖೆಯಿಂದ ಹಲವು ಯೋಜನೆಗಳು ಇವೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಅಶೋಕ್ ಕುಮಾರ್ ಜಾದವ್, ಶ್ರೀಮತಿ ಶೈಲಾ ಬಸನಗೌಡ ಪಾಟೀಲ್ ಯತ್ನಾಳ್, ಶಾಹೀದಬೇಗಂ ಹಕೀಂ, ಡಾ. ಬಾಬು ರಾಜೇಂದ್ರ ನಾಯಕ್, ಬಸನಗೌಡ ಹರನಾಳ, ರಾಜೇಶ್ವರಿ ಜುಗತಿ, ರಾಜಶೇಖರ ಕವಲಗಿ, ಉಪಸ್ಥಿತರಿದ್ದರು.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img